ಚಿತ್ರದ ಬಿಡುಗಡೆ ವಿರೋಧಿಸಿ ಹರಿಯಾಣದ ಗುರುಗ್ರಾಮದ ಉಪ ಆಯುಕ್ತರ ಕಚೇರಿ ಎದುರಿ ಕರ್ಣಿ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ಣಿ ಸೇನಾ ಅಧ್ಯಕ್ಷ ಮಹಿಪಾಲ್ ಸಿಂಗ್ ಮಕ್ರಾನ ಅವರು, ಹರಿಯಾಣದಲ್ಲಿ ಪದ್ಮಾವತಿ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಒತ್ತಾಯಿಸಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.