ಇದೇ ವೇಳೆ ಸಂವಿಧಾನ ದಿನಾಚರಣೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶದ ಸಂವಿಧಾನವನ್ನು ನಿರ್ಮಿಸಲು ಅತ್ಯಂತ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಹೃದಯಪೂರ್ವಕ ನಮನ ಸಲ್ಲಿಸುತ್ತೇವೆ ಎಂದಿದ್ದಾರೆ. ನಮ್ಮ ಸಂವಿಧಾನ ಸಮಾಜದ ಬಡಾ ಹಾಗೂ ದುರ್ಬಲ ವರ್ಗದವರನ್ನು ರಕ್ಷಿಸುತ್ತದೆ, ನಾವು ಹೆಮ್ಮೆಪಡುವ ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಲು ಸಂವಿಧಾನ ರಚನೆಕಾರರು ಶ್ರಮಿಸಿದ್ದಾರೆ, ಇದೇ ಸಂವಿಧಾನದ ಮಾರ್ಗದರ್ಶನದಲ್ಲಿ ನವ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ದೇಶದ ಜನತೆಗೆ ಕರೆ ನೀಡಿದ್ದಾರೆ.