ನೋಟು ನಿಷೇಧದ ವಿಷಯದಲ್ಲಿ ಕಾಂಗ್ರೆಸ್ ಗೆ ಅಸಮಾಧಾನ
ನೋಟು ನಿಷೇಧದಿಂದ ಕಾಂಗ್ರೆಸ್ ನವರಿಗೆ ಅಸಮಾಧಾನವಾಗಿದೆ. ಆದ್ದರಿಂದಲೇ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ. ನಾನು ಸರ್ದಾರ್ ಪಟೇಲರು ಜನಿಸಿದ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇನೆ, ಬಡವರಿಗೆ ಸೇರಬೇಕಾದ್ದು ಸೇರುವಂತೆ ಮಾಡಿಯೇ ಸಿದ್ಧ, ದೇಶವನ್ನು ಲೂಟಿ ಮಾಡಲು ಬಿಡುವುದಿಲ್ಲ ಎಂಬುದನ್ನು ಕಾಂಗ್ರೆಸ್ ನವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ ಮೋದಿ.
29/11 ರಲ್ಲಿ ಹಾಗೂ ಇತ್ತೀಚೆಗೆ ಉರಿಯಲ್ಲಿ ಭಯೋತ್ಪಾದಕರ ದಾಳಿ ನಡೆದಿತ್ತು, ಎರಡೂ ದಾಳಿಯಲ್ಲಿ ಭಾರತ ಹೇಗೆ ಪ್ರತಿಕ್ರಿಯಿಸಿದೆ ಎಂಬುದನ್ನು ನೀವು ನೋಡಿದ್ದೀರಿ, ಇದು ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ವ್ಯತ್ಯಾಸವನ್ನು ತೋರುತ್ತದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನ ವಂಶರಾಜಕಾರಣದ ಬಗ್ಗೆಯೂ ಟೀಕಾಪ್ರಹಾರ ನಡೆಸಿರುವ ಮೋದಿ, " ನಿಮ್ಮ ಭಾಷಣಗಳಲ್ಲಿ ನೆಹರು ಅವರನ್ನೇಕೆ ಉಲ್ಲೇಖಿಸುವುದಿಲ್ಲ ಎಂಬ ಪ್ರಶ್ನೆಗಳನ್ನು ಎದುರಿಸಿದ್ದೇನೆ, ಕಾಂಗ್ರೆಸ್ ನ ಪಕ್ಷದ ಅಧ್ಯಕ್ಷರ ಹೆಸರುಗಳನ್ನು ಬರೆಯಿರಿ ಎಂದು ಕಾಂಗ್ರೆಸ್ ನಾಯಕರನ್ನು ಕೇಳಿದ್ದೆ, ಆದರೆ ಅವರುಗಳಿಗೆ ಬೋಸ್, ಕಾಮರಾಜ್ ನಂತಹ ನಾಯಕರು ನೆನಪೇ ಆಗುವುದಿಲ್ಲ, ಅವರ ಪಕ್ಷದವರ ಹೆಸರುಗಳನ್ನೇ ನೆನಪಿಟ್ಟುಕೊಳ್ಳಲಾಗದವರು ಗುಜರಾತ್ ನ್ನು ಹೇಗೆ ಅರ್ಥಮಾಡಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.