ಇವಾಂಕಾ-ಪ್ರಧಾನಿ ಮೋದಿ ಹೈದರಾಬಾದ್ ನ ಫಲಕ್ನುಮಾ ಪ್ಯಾಲೆಸ್ ನಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಿಂದ ಭದ್ರತಾ ಕಾರಣದಿಂದಾಗಿ ಮಾಧ್ಯಮಗಳನ್ನು ದೂರವಿಡಲಾಗಿತ್ತು. ಇದರ ಹೊರತಾಗಿಯೂ ಸ್ಥಳೀಯವಾಹಿನಿಯ ಪತ್ರಕರ್ತನೋರ್ವ ಭೋಜನಕೂಟದ ದೃಶ್ಯಾವಳಿಯನ್ನು ನೇರ ಪ್ರಸಾರ ಮಾಡಿದ್ದಾನೆ ಎನ್ನಲಾಗಿದೆ. ಇದು ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಭದ್ರತಾ ಮೇಲುಸ್ತುವಾರಿ ವಹಿಸಿಕೊಂಡಿರುವ ಎಸ್ ಪಿಜಿ ಮುಖ್ಯಸ್ಥ ಎಕೆ ಸಿನ್ಹಾ ಅವರು ಪೊಲೀಸ್ ಮಹಾನಿರ್ದೇಶಕ ಪಿ ಮಹೇಂದ್ರ ರೆಡ್ಡಿ ಅವರಿಗೆ ಕರೆ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅಂತೆಯೇ ಪ್ರಧಾನಿ ಕಚೇರಿಯ ಮುಖ್ಯಕಾರ್ಯದರ್ಶಿಗಳೂ ಕೂಡ ಘಟನೆ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.