ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರ ಕ್ಷೇತ್ರಕ್ಕೆ ಕಳೆದ ಏಪ್ರಿಲ್ ನಲ್ಲಿ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ದಿನಕರನ್ ಅವರು ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಮತದಾರರಿಗೆ ಭಾರಿ ಪ್ರಮಾಣದ ಹಣ ಹಂಚಲಾಗುತ್ತಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗಕ್ಕೆ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ದಿನಕರನ್ ಅವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು.