ಆರ್.ಕೆ. ನಗರ ಉಪಚುನಾವಣೆ: ಆಡತಾಳಿತಾರೂಢ ಎಐಎಡಿಎಂಕೆಯಿಂದ ಇ. ಮಧುಸೂಧನನ್ ಸ್ಪರ್ಧೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಬಳಿಕ ತೆರವಾಗಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಹಿರಿಯ ನಾಯಕರಾಗಿರುವ...
ಆರ್.ಕೆ. ನಗರ ಉಪಚುನಾವಣೆ: ಆಡತಾಳಿತಾರೂಢ ಎಐಎಡಿಎಂಕೆಯಿಂದ ಇ. ಮಧುಸೂಧನನ್ ಸ್ಪರ್ಧೆ
ಆರ್.ಕೆ. ನಗರ ಉಪಚುನಾವಣೆ: ಆಡತಾಳಿತಾರೂಢ ಎಐಎಡಿಎಂಕೆಯಿಂದ ಇ. ಮಧುಸೂಧನನ್ ಸ್ಪರ್ಧೆ
Updated on
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಬಳಿಕ ತೆರವಾಗಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಹಿರಿಯ ನಾಯಕರಾಗಿರುವ ಇ. ಮಧುಸೂದನನ್ ಅವರನ್ನು ತಮ್ಮ ಅಭ್ಯರ್ಥಿಯಾಗಿ ಗುರುವಾರ ಘೋಷಣೆ ಮಾಡಿದೆ. 
ಚೆನ್ನೈನ ರಾಯಪೆಟ್ಟಾದಲ್ಲಿರುವ ಎಐಎಡಿಎಂಕೆ ಮುಖ್ಯಕಚೇರಿಯಲ್ಲಿ ಸುಧೀರ್ಘ ಕಾಲ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಸಭೆಯಲ್ಲಿ ಮಧುಸೂದನನ್ ಅವರನ್ನು ಉಪ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 
ಸಂಸದೀಯ ಮಂಡಳಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಹಾಗೂ ಮಾಜಿ ಸಚಿವರಾದ ಕೆ.ಪಿ. ಮನುಸಾಮಿ ಹಾಗೂ ವೈಥಿಲಿಂಗ್ ಸೇರಿ ಒಟ್ಟು 9 ಮಂದಿ ಸದಸ್ಯರಿದ್ದಾರೆ. 
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದ ತೆರವಾಗಿರುವ ಆರ್.ಕೆ.ನಗರ ವಿಧಾನಸಭಾ ಉಪಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗ ಪ್ರಕಟಿಸಿದೆ. ಡಿ.31ರ ಒಳಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಅದರಂತೆ, ಉಪಚುನಾವಣೆಗೆ ಡಿ.21ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು. ಡಿ.24ರಂದು ಮತ ಎಣಿಕೆ ನಡೆಯಲಿದೆ. ಡಿ.4 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.5 ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.7 ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com