ಡಿಸೆಂಬರ್ 4 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನೇ ಕಾಂಗ್ರೆಸ್ ಪಕ್ಷ ಅವಿರೋಧವಾಗಿ ಆಯ್ಕೆ ಮಾಡುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನಾಗಿ ರಾಹುಲ್ ಗಾಂಧಿಯವರನ್ನು ಆರಿಸುತ್ತಿರುವ ಕಾಂಗ್ರೆಸ್ ನ ಕ್ರಮ ಹಲವು ಕಾಂಗ್ರೆಸ್ಸಿಗರಿಗೆ ಇಷ್ಟವಿಲ್ಲದಿದ್ದರೂ, ಹೈಕಮಾಂಡ್ ವಿರುದ್ಧ ಸೆಡ್ಡುಹೊಡೆಯುವುದಕ್ಕೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬಾಯಿಮುಚ್ಚಿಕೊಂಡು ಸುಮ್ಮನಿದ್ದಾರೆ. ಆದರೆ ಪೂನಾವಾಲಾ ಅವರು ಮಾತ್ರ ಬಹಿರಂಗವಾಗಿ ಇದನ್ನು ಖಂಡಿಸಿದ್ದಲ್ಲದೆ, ಈ ಹುದ್ದೆಗೆ ರಾಹುಲ್ ಅರ್ಹರೇ ಎಂಬ ಪ್ರಶ್ನೆಯನ್ನು ಪರೋಕ್ಷವಾಗಿ ಕೇಳಿ, ಪತ್ರವೊಂದನ್ನು ಬರೆದಿದ್ದರು.