ಹಾದಿಯಾ ಉಗ್ರವಾದಿಗಳಿಂದ ದೂರವಿದ್ದು ವ್ಯಾಸಂಗ ಮಾಡಲೆಂದೇ ಸುಪ್ರೀಂ ಕೋರ್ಟ್ ಆಕೆಯನ್ನು ಸುರಕ್ಷಿತ ಪ್ರದೇಶಕ್ಕೆ ವ್ಯಾಸಂಗಕ್ಕಾಗಿ ಕಳುಹಿಸಿತ್ತು. ಆದರೆ ಕಾಲೇಜಿನಲ್ಲೂ ಆಕೆ ಜೆಹಾನ್ ನನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ್ದು, ಇದು ಆಕೆಯ ಸುರಕ್ಷತೆ ವಿಚಾರದಲ್ಲಿ ರಾಜಿ ಮಾಡಿಕೊಂಡತೆ ಕಂಡುಬರುತ್ತಿದೆ ಎಂದು ತಮ್ಮ ದೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಅಂತೆಯೇ ಈ ಬಗ್ಗೆ ಕೂಡಲೇ ನಾನು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸುವುದಾಗಿಯೂ, ಜೆಹಾನ್ ಆಕೆಯನ್ನು ಭೇಟಿಯಾಗದಂತೆ, ಸಂಪರ್ಕಿಸದಂತೆ ಆದೇಶ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.