ಇನ್ನು ಈ ಕುರಿತು ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಮಕ್ಕಳು ಅವಧಿಗೂ ಮುನ್ನ ಜನಿಸಿದ್ದವು. ತಪಾಸಣೆ ಮಾಡಿದಾಗ ಎರಡೂ ಮಕ್ಕಳು ಮೃತಪಟ್ಟಿದ್ದವು. ಆದರೆ, ಒಂದು ಮಗು ಬದುಕಿರುವುದು ಪವಾಡವೇ ಸರಿ. ಇದೊಂದು ಅಪರೂಪದ ಪ್ರಕರಣವಾಗಿದ್ದು, ತನಿಖೆ ಆದೇಶಿಸಲಾಗಿದೆ. ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ರಜೆಗೆ ಕಳುಹಿಸಲಾಗಿದೆ. ಪಾಲಕರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದೆ.