ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಅಭಿವೃದ್ಧಿಗೆ ಸಿಕ್ಕ ಜಯ ಎಂದಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಅಭಿವೃದ್ಧಿ ಗೆಲುವು ಸಾಧಿಸಿದೆ. ಈ ಭರ್ಜರಿ ಗೆಲುವು ನೀಡಿದ ಉತ್ತರ ಪ್ರದೇಶ ಜನತೆಗ ಧನ್ಯವಾದ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಶುಭಾಶಗಳನ್ನು ಕೋರಿದ್ದಾರೆ.