ಈ ಕುರಿತಂತೆ ಮಾತನಾಡಿರುವ ಅವರು, ಪಾಕಿಸ್ತಾನ ಸೇನೆ ಪದೇ ಪದೇ ಕದನ ಉಲ್ಲಂಘನೆ ಮಾಡುತ್ತಿದೆ. ದೇಶದಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿಯನ್ನು ಜಾಗತಿಕವಾಗಿ ಅಹಿಂಸಾತ್ಮಕ ದಿನವೆಂದು ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿಯೇ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿರುವುದು ನಾಚಿಕೆಗೇಡಿನ ವರ್ತನೆಯಾಗಿದೆ ಎಂದು ಹೇಳಿದ್ದಾರೆ.