ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ದಿನಕರನ್ ಅವರು, ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ನಂತರ ತೆಗೆದ ವಿಡಿಯೋ ಶಶಿಕಲಾ ಅವರ ಬಳಿ ಇದ್ದು, ಅದನ್ನು ತನಿಖಾ ಸಂಸ್ಥೆಗೆ ನೀಡುತ್ತೇನೆ. ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹಾಗೂ ದಿಂಡಿಗಲ್ ಶ್ರೀನಿವಾಸನ್ ಸೇರಿದಂತೆ ಕೆಲವು ನಾಯಕರು ಯೂ ಟರ್ನ್ ಹೊಡೆಯುತ್ತಿರುವುದರಿಂದ ಜನ ನಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಆದರೆ ಅಮ್ಮ ಸಾವಿನ ನಂತರ ಅವರು ಹೇಗೆ ತಮ್ಮ ನಿಷ್ಠೆ ಬದಲಿಸಿದ್ದಾರೆ ಎಂಬುದು ಆ ವಿಡಿಯೋ ನೋಡಿದರೆ ಗೊತ್ತಾಗುತ್ತೆ ಎಂದು ಹೇಳಿದ್ದರು.