ಪಂಜಾಬ್ ನಲ್ಲಿ ಅತ್ಯಾಚಾರಿ ಬಾಬಾ ರಾಮ್ ರಹೀಂ ಸಿಂಗ್ ಆಪ್ತೆ ಹನಿಪ್ರೀತ್ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಆಪ್ತೆ ಹಾಗೂ ದತ್ತು....
ಹನಿಪ್ರೀತ್
ಹನಿಪ್ರೀತ್
Updated on
ಪಂಚಕುಲ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಆಪ್ತೆ ಹಾಗೂ ದತ್ತು ಪುತ್ರಿ ಎನ್ನಲಾಗುತ್ತಿರುವ ಹನಿಪ್ರೀತ್ ಇನ್ಸಾನ್ ರನ್ನು ಹರಿಯಾಣ ಪೊಲೀಸರು ಮಂಗಳವಾರ ಪಂಜಾಬ್ ನಲ್ಲಿ ಬಂಧಿಸಿದ್ದಾರೆ. 
ಅತ್ಯಾಚಾರಿ ಬಾಬಾ ಜೈಲು ಪಾಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಹನಿಪ್ರೀತ್ ಳನ್ನು ಸುಮಾರು ಒಂದು ತಿಂಗಳ ನಂತರ ಇಂದು ಜಿರ್ಕಾಪುರ್ -ಪಟಿಯಾಲ ರಸ್ತೆಯಲ್ಲಿ ಬಂಧಿಸುವಲ್ಲಿ ಹರಿಯಾಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಿಯಾಂಕ ತನೆಜಾ ಅಲಿಯಾಸ್ ಹನಿಪ್ರೀತ್ ಳನ್ನು ಜಿರ್ಕಾಪುರ್ -ಪಟಿಯಾಲ ರಸ್ತೆಯಲ್ಲಿ ಬಂಧಿಸಿರುವುದಾಗಿ ಹರಿಯಾಣ ಪೊಲೀಸ್ ಮಹಾ ನಿರ್ದೇಶಕ ಬಿ ಎಸ್ ಸಂಧು ಅವರು ಹೇಳಿದ್ದಾರೆ.
ವಿಶೇಷ ತನಿಖಾ ತಂಡ(ಎಸ್ಐಟಿ)ದ ಮುಖ್ಯಸ್ಥ ಮುಕೇಶ್ ಕುಮಾರ್ ನೇತೃತ್ವದ ತಂಡ ಹನಿಪ್ರೀತ್ ಗಳನ್ನು ವಶಕ್ಕೆ ಪಡೆದಿದ್ದು, ನಾಳೆ ಪಂಚಕುಲ ಕೋರ್ಟ್ ಗೆ ಹಾಜರುಪಡಿಸುವುದಾಗಿ ಪೊಲೀಸ್ ಆಯುಕ್ತ ಎ ಎಸ್ ಚಾವ್ಲಾ ಅವರು ತಿಳಿಸಿದ್ದಾರೆ.
41 ಮಂದಿಯನ್ನು ಬಲಿ ಪಡೆದ ಪಂಚಕುಲ ಹಿಂಸಾಚಾರ ಪ್ರಕರಣದಲ್ಲಿ ಹನಿಪ್ರೀತ್ ಪಾತ್ರ ಮತ್ತು ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ವೇಳೆ ಆಕೆಯ ಯಾರು ಆಶ್ರಯ, ಬೆಂಬಲ ನೀಡಿದ್ದರು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಚಾವ್ಲಾ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ದೋಷಿ ಎಂದು ಘೋಷಿಸಿದ ಬಳಿಕ ಪಂಚಕುಲದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳೆದ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದರು.
ನಿನ್ನೆ ದಿಢೀರ್ ರಾಷ್ಟ್ರೀಯ ಮಾಧ್ಯಮವೊಂದರ ಮುಂದೆ ಕಾಣಿಸಿಕೊಂಡ ಹನಿಪ್ರೀತ್, ತಾವು ಮುಂದೆ ಏನು ಮಾಡಬೇಕು ಎಂಬುದರ ಕುರಿತು ಕಾನೂನು ಸಲಹೆ ಪಡೆಯುತ್ತಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com