ಕೆಲ ದಿನಗಳ ಹಿಂದಷ್ಟೇ ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇರಳ ಸರ್ಕಾರ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆ ತಿರುಗೇಟು ನೀಡಿದ್ದ ಪಿಣರಾಯಿ ವಿಜಯನ್ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ ಆರ್ಎಸ್ಎಸ್ ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದ್ದರು.