ಬಿಎಸ್ಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ: ಓರ್ವ ಯೋಧ ಹುತಾತ್ಮ

ಶ್ರೀನಗರ ಬಿಎಸ್ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಜಮ್ಮು: ಶ್ರೀನಗರ ಬಿಎಸ್ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಬಿಎಸ್ಎಫ್ 182 ಬೆಟಾಲಿಯನ್ ಪಡೆಯನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಗಿಳಿದ ಸೇನಾಪಡೆಗಳು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಅಲ್ಲದೆ, ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಇದೀಗ ಓರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಇನ್ನು ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಉನ್ನತ ನಾಯಕರು ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 11.30 ಗಂಟೆಗೆ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com