ಇಂದು ತಮ್ಮ ಸ್ವಕ್ಷೇತ್ರ ಅಮೆಥಿಯಲ್ಲಿ ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಯೋಜನೆಯನ್ನು ಪ್ರಧಾನಿ ಮೋದಿ ವಿರೋದಿಸಿದ್ದರು. ಅದೊಂದು ಅಪ್ರಯೋಜಕ ಯೋಜನೆ ಎಂದು ಟೀಕಿಸಿದ್ದರು. ಕೆಲ ತಿಂಗಳುಗಳ ನಂತರ ನರೇಗಾ ಯೋಜನೆ ಅತ್ಯುಪಯುಕ್ತ ಎಂದು ಹೇಳುತ್ತಿರುವುದಾಗಿ ಲೇವಡಿ ಮಾಡಿದರು.