ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಿಮಿತ್ತ ನಟ ಬಾಲಕೃಷ್ಣ ಪ್ರಚಾರಕ್ಕಾಗಿ ಆಗಮಿಸಿದ್ದರು. ಈ ವೇಳೆ ಮನೆ ಮನೆ ಪ್ರಚಾರ ಕೈಗೊಂಡಿದ್ದ ಅವರ ಪಕ್ಷದ ಭಿತ್ತಿ ಪತ್ರಗಳನ್ನು ಜನರಿಗೆ ನೀಡುತ್ತಿದ್ದರು. ನಟ ಬಾಲಕೃಷ್ಣ ಬಂದ ಕಾರಣ ಜನರೂ ಕೂಡ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ನೂಕುನುಗ್ಗಲಾಗಿ ಓರ್ವ ವ್ಯಕ್ತಿ ಬಾಲಯ್ಯ ಅವರ ಭದ್ರತಾ ಸಿಬ್ಬಂದಿಯನ್ನು ಮುಂದಕ್ಕೆ ತಳ್ಳಿದ್ದಾನೆ. ಇಷ್ಟಕ್ಕೇ ಕೋಪಗೊಂಡ ಬಾಲಕೃಷ್ಣ ಕೂಡಲೇ ತಳ್ಳಿದ ವ್ಯಕ್ತಿಯ ಕಪಾಳಕ್ಕೆ ಹೊಡೆದು ಹಿಂದೆ ನಿಲ್ಲುವಂತೆ ಗದರಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.