ನವದೆಹಲಿ: 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ದೆಹಲಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ, ಸದ್ಯ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 5 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಯನ್ನು ಖಾಯಂ ಮಾಡುವ ಮಸೂದೆಯನ್ನು ದೆಹಲಿ ವಿಧಾನಸಭೆ ಅಂಗೀಕರಿಸಿದ್ದು, ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮತ್ತು ಕೇಜ್ರಿವಾಲ್ ನಡುವಿನ ಜಂಗಿ ಕುಸ್ತಿಗೆ ಕಾರಣವಾಗಿದೆ.