ದಕ್ಷಿಣ ಭಾರತದ ದಾವೂದ್ ಎಂದೇ ಕುಖ್ಯಾತಿ ಪಡೆದಿದ್ದ ಗ್ಯಾಂಗ್ ಸ್ಟರ್ ಶ್ರೀಧರ್ ಧನಪಾಲನ್ ಸೈನೈಡ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಸುದ್ದಿಸಂಸ್ಥೆಯೊಂದು ವರದಿ ಮಾಡಿರುವಂತೆ ಕೌಟುಂಬಿಕ ಕಾರಣಗಳಿಂದಾಗಿ ಶ್ರೀಧರ್ ಕಾಂಬೋಡಿಯಾದಲ್ಲಿ ಸೈನೆಡ್ ತಿಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. 44ರ ಹರೆಯದ ಧನಪಾಲನ್ ಕೌಟುಂಬಿಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಆತನನ್ನು ಕಾಂಬೋಡಿಯಾದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.