ಅಪಾರ್ಟ್ ಮೆಂಟ್ ನ ಮೇಲ್ಮಹಡಿಯಲ್ಲಿ ಲಕ್ಷ್ಮೀ ನಾರಾಯಣ ಮೂರ್ತಿಯವರು ಒಬ್ಬರೇ ವಾಸಿಸುತ್ತಿದ್ದರು. ಆಗಸ್ಟ್ 18ರಂದು ಬಚ್ಚಲು ಮನೆಗೆ ಸ್ನಾನ ಮಾಡಲು ಹೋಗಿದ್ದವರು ಸ್ನಾನ ಮುಗಿಸಿಕೊಂಡು ಹೊರಬಂದಾಗ ಹಲ್ಲಿಯ ಮೇಲೆ ಆಕಸ್ಮಿಕವಾಗಿ ಕಾಲಿಟ್ಟು ಬಿದ್ದಿದ್ದಾರೆ. ಆಗ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಗಲೇ ಮೃತಪಟ್ಟಿರಬಹುದು ಎಂದು ಪೊಲೀಸರು ಹೇಳುತ್ತಾರೆ. ಮನೆಯ ಕಿಟಕಿ, ಬಾಗಿಲುಗಳೆಲ್ಲಾ ಮುಚ್ಚಿದ್ದರಿಂದ ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಡಿದಿರಲಿಲ್ಲ.