ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಅನಾರೋಗ್ಯಪೀಡಿತ ಅವರ ಪತಿಯನ್ನು ಭೇಟಿ ಮಾಡುವುದಕ್ಕಾಗಿ ಐದು ದಿನಗಳ ಕಾಲ ಪೆರೋಲ್ ನೀಡಿದ್ದಾರೆ. ಆದರೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ಆಪ್ತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.