ಮರಣದಂಡನೆ ಶಿಕ್ಷೆ ವಿಧಿಸುವ ವಿಧಾನದ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಮ್ಮ ಸಂವಿಧಾನ ಹಾನುಭೂತಿಯುಳ್ಳದ್ದಾಗಿದ್ದು, ಅದು ಜೀವನದ ಪವಿತ್ರತೆಯ ತತ್ವವನ್ನು ಗುರುತಿಸುತ್ತದೆ. ಆಧುನಿಕ ಕಾಲದಲ್ಲಿ ಹಲವು ವಿಧಾನಗಳನ್ನು ಕಂಡುಹಿಡಿದಿರುವಾಗ, ತಂತ್ರಜ್ಞಾನ ಇಷ್ಟೊಂದು ಮುಂದುವರಿದಿರುವಾಗ ಗಲ್ಲು ಶಿಕ್ಷೆಗೆ ಗುರಿಯಾಗಿರುವವರಿಗೆ ಬೇರೆ ವಿಧಾನಗಳ ಮೂಲಕ ಶಿಕ್ಷೆ ನೀಡಲು ಶಾಸನ ರೂಪಿಸುವ ಕುರಿತು ಸರ್ಕಾರ ಯೋಚಿಸಬಹುದು ಎಂದು ಹೇಳಿದೆ.