ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬಾಂಗ್ಲಾ ಗಡಿ ಭದ್ರತಾ ಡಿಜಿ, ಬಾಂಗ್ಲಾದೇಶ ಸರ್ಕಾರ ನೀತಿಗಳು ಸ್ಪಷ್ಟವಾಗಿದ್ದು, ನಮ್ಮ ಭೂಮಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಯಾವುದೇ ರೀತಿಯ ಜಾಗವಿಲ್ಲ ಎಂಬ ಭರವಸೆಯನ್ನು ನೀಡುತ್ತಿದ್ದೇವೆ. ನೆರೆರಾಷ್ಟ್ರ ಭಾರತದಲ್ಲಿಯೂ ಭಯೋತ್ಪಾದನಾ ಚಟುವಟಿಕೆಗಳು ನಡೆಯಲು ಬಿಡುವುದಿಲ್ಲ. ಮ್ಯಾನ್ಮಾರ್ ಗಡಿಯೊಂದಿಗೆ ಬೇಲಿ ಹಾಕಲು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.