ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ದಿನಕರನ್ ಅವರು, ಶಶಿಕಲಾ ಅವರು ಪೆರೋಲ್ ಮೇಲೆ ಹೊರಬಂದಿದ್ದಾರೆ. ಬಹಳ ಸಂತೋಷವಾಗುತ್ತಿದೆ. ಜೈಲಿನಿಂದ ಹೊರಬಂದ ಶಶಿಕಲಾ ಅವರನ್ನು ಕಾರ್ಯಕರ್ತರು ಅತ್ಯುತ್ತಮವಾಗಿ ಸ್ವಾಗತಿಸಿದ್ದಾರೆ. ಶಶಿಕಲಾ ಅವರ ಮನವಿಗೆ ಕರ್ನಾಟಕ ಸರ್ಕಾರದ ಜೈಲು ಅಧಿಕಾರಿಗಳು ಸ್ಪಂಧಿಸಿದ್ದಾರೆ. ಕೆಲ ಪರಿಸ್ಥಿತಿಗಳಿಂದಾಗಿ ಶಶಿಕಲಾ ಅವರು ಪೆರೋಲ್ ಮೇಲೆ ಹೊರಬಂದಿರುವುದರಿಂದ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ. ಯಾವುದೇ ಸಭೆಯಾಗಲೀ ಅಥವಾ ಪತ್ರಿಕಾಗೋಷ್ಠಿಗಳನ್ನು ನಡೆಸುವುದಿಲ್ಲ. ಚೆನ್ನೈ ನಗರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.