ಇದೇ ಸಂದರ್ಭದಲ್ಲಿ ವೈದ್ಯರುಗಳು ಮುಂದೆ ಬಂದು ಆರೋಗ್ಯ ವಲಯದಲ್ಲಿ ಸೇವೆಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಕೇವಲ ವೈದ್ಯರಿಂದ ಮಾತ್ರ ಆರೋಗ್ಯ ನೀಡಲು ಸಾಧ್ಯವಿಲ್ಲ, ಉತ್ತಮ ಹವ್ಯಾಸ, ಸ್ವಚ್ಛತೆ ಕೂಡ ಅಗತ್ಯ. ಈ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಮುಖ್ಯವಾಗಿದ್ದು ದೇಶವಾಸಿಗಳು ಇದರಲ್ಲಿ ಭಾಗಿಯಾಗಬೇಕೆಂದು ಒತ್ತಾಯಿಸುತ್ತೇವೆ ಎಂದರು.