ಭಾರತೀಯ ಸೇನೆ
ಭಾರತೀಯ ಸೇನೆ

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖಂಡನ ಹತ್ಯೆ ಮಾಡಲಾಗಿದೆ. 
ಶ್ರೀನಗರದ ಬಾರಾಮುಲ್ಲಾ-ಅಂದ್ವಾರ ಹೆದ್ದಾರಿಯಲ್ಲಿ ಮಧ್ಯಾಹ್ನ ಭಾರತೀಯ ಯೋಧರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪಾಕಿಸ್ತಾನ ಮೂಲದ ಉಗ್ರ ಜೈಶ್ ಖಲೀದ್ ಗಾಯಗೊಂಡು ತಪ್ಪಿಸಿಕೊಂಡಿದ್ದ. ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಆತ ತೀವ್ರ ರಕ್ತಸ್ರಾವದಿಂದಾಗಿ ಆತ ಮೃತಪಟ್ಟಿದ್ದಾನೆ. 
ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಭಾರತೀಯ ಯೋಧರ ಮೇಲೆ ಭೀಕರ ದಾಳಿ ನಡೆಸಲು ಹೊಂಚು ಹಾಕುತ್ತಿದ್ದು ಗಡಿಯೊಳಗೆ ನುಸುಳುತ್ತಿರುವ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com