ಸೆಪ್ಟೆಂಬರ್ 27ರಂದು ಮುಸ್ಲಿಂ ಜನಪದ ಗಾಯಕ 45ರ ಹರೆಯದ ಅಹಮದ್ ಖಾನ್ ಎನ್ನುವವರು ಸಮಾರಂಭವೊಂದರಲ್ಲಿ ಹಾಡುತ್ತಿರುವ ವೇಳೆ ಹಿಂದೂ ದೇವತೆಯ ಶ್ಲೋಕಗಳನ್ನು ತಪ್ಪಾಗಿ ಪಠಿಸಿದ್ದಾರೆ. ಈ ವೇಳೆ ತಕರಾರು ತೆಗೆದ ಅರ್ಚಕ ರಮೇಶ್ ಸುತಾರ್ ಎಂಬಾತ ತನ್ನ ಬೆಂಬಲಿಗರೊಂದಿಗೆ ಬಂದು ಸಂಗೀತ ಪರಿಕರಗಳನ್ನು ಧ್ವಂಸಗೈದು ಮಾರಣಾಂತಿಕವಾಗಿ ಥಳಿಸಿ ಖಾನ್ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು.