ಮುಂಬೈ: 2008 ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು ದೊರೆತಿದೆ.
ಮುಂಬೈನ ನ್ಯಾಯಾಲಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದು, 50,000 ರೂಪಾಯಿ ಬಾಂಡ್ ನೀಡುವಂತೆ ಸೂಚನೆ ನೀಡಿದೆ. ಲೆಫ್ಟಿನೆಂಟ್ ಕರ್ನಲ್ ಪುರೋಹಿತ್, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಸೇನಾ ಮೇಜರ್ ರಮೇಶ್ ಉಪಾಧ್ಯಾಯ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ.
2008 ರ ಸೆಪ್ಟೆಂಬರ್ 29 ರಂದು ಸಂಭವಿಸಿದ್ದ ಮಾಲೇಗಾಂವ್ ಸ್ಫೋಟದಲ್ಲಿ 6 ಜನ ಮೃತಪಟ್ಟು, 100 ಜನರಿಗೆ ಗಾಯಗಳಾಗಿತ್ತು.