ಸುಪ್ರೀಂಕೋರ್ಟ್ ಆದೇಶ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ತ್ರಿಪುರ ರಾಜ್ಯಪಾಲ ತಥಾಗತ್ ರಾಯ್ ಅವರು, ಮೊದಲು ದಹಿ ಹಂಡಿ ನಿಷೇಧಿಸಲಾಯಿತು. ಈಗ ಪಟಾಕಿ ನಿಷೇಧಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ವಾರ್ಡ್ ವಾಪ್ಸಿ ಬ್ರಿಗೇಡ್ ನವರು ಹಿಂದೂಗಳ ಶವ ಸುಡುವ ಪದ್ಧತಿ ನಿಷೇಧಿಸಬೇಕು. ಇದರಿಂದ ಪರಿಸರ ಮಾಲಿನ್ಯವಾಗುತ್ತದೆ ಎಂಬ ಅರ್ಜಿ ಸಲ್ಲಿಸಿದರೂ ಅಚ್ಚರಿಯಿಲ್ಲ ಎಂದು ಟೀಕಿಸಿದ್ದಾರೆ.