ಇತ್ತೀಚೆಗಷ್ಟೇ ಮೋದಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳನ್ನು ಟಿಕಿಸಿದ್ದ ಯಶ್ವಂತ್ ಸಿನ್ಹಾ, ಜಯ್ ಷಾ ನಡೆಸುತ್ತಿರುವ ಉದ್ಯಮದ ಆದಾಯದ ಬಗ್ಗೆ ವರದಿ ಪ್ರಕಟಿಸಿದ್ದ ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವರೊಬ್ಬರು ಅಮಿತ್ ಷಾ ಮಗನನ್ನು ಸಮರ್ಥಿಸಿಕೊಳ್ಳಲು ನಿಂತಿದ್ದು ಸರಿಯಲ್ಲ, ಅವರು ಕೇಂದ್ರ ಸಚಿವರೇ ಹೊರತು ಜಯ್ ಷಾ ಅವರ ಚಾರ್ಟೆಡ್ ಅಕೌಂಟೆಂಟ್ ಅಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೀಡಿದ್ದ ಸಮರ್ಥನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.