ನಾನು ಮಮತಾ ಬ್ಯಾನರ್ಜಿ ಸೇವಕನಲ್ಲ: ಮುಕುಲ್ ರಾಯ್

ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ...
ಮುಕುಲ್ ರಾಯ್
ಮುಕುಲ್ ರಾಯ್
ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಮುಕುಲ್ ರಾಯ್ ಅವರು ಬುಧವಾರ ಪಕ್ಷ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 
ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಅವರು ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. 
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿ ನಾವು ಸಂಗಾತಿಗಳಾಗಿರಬೇಕು. ಸೇವಕರಲ್ಲ. ನಾನು ಮಮತಾ ಬ್ಯಾನರ್ಜಿಯವರ ಸೇವಕನಲ್ಲ. ಏಕವ್ಯಕ್ತಿ ಪಕ್ಷ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಳಿಕ ಬಿಜೆಪಿ ಸೇರುವ ಕುರಿತಂತೆ ಉಂಟಾಗಿರುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 1998ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜತೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳುವ ಸಂದರ್ಭದಲ್ಲಿ ಟಿಎಂಸಿ ನಾಯಕತ್ವ ಬಿಜೆಪಿ ಕೋಮುವಾದಿ ಪಕ್ಷವಲ್ಲ ಎಂದು ಹೇಳಿತ್ತು ಎಂದು ನೆನಪಿಸಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಮುಕುಲ್ ರಾಯ್ ಅವರನ್ನು ಸೆ.25 ರಂದು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com