ಜನಪ್ರತಿನಿಧಿ ಕಾಯ್ದೆ ಪ್ರಕಾರ ಯಾವುದೇ ಶಾಸಕ ಅಥವಾ ಶಾಸಕಿ ಮೃತಪಟ್ಟ ನಂತರ, ಅವರಿಂದ ತೆರವಾಗುವ ಸ್ಥಾನಕ್ಕೆ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂಬ ನಿಯಮವಿದೆ. ಆದರೆ ಒಂದು ವರ್ಷ ಕಳೆಯುತ್ತಿದ್ದರೂ ಇದುವರೆಗೂ ಆರ್ ಕೆ ನಗರಕ್ಕೆ ಚುನಾವಣೆ ದಿನಾಂಕ ಘೋಷಿಸದಿರುವುದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಆಯೋಗಕ್ಕೆ ಆದೇಶಿಸಿತ್ತು.