ಕಳೆದ ಚುನಾವಣೆ ವೇಳೆ ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುವುದಾಗಿ ಮತ್ತು ದೇಶದ ಪ್ರತಿ ನಾಗರಿಕರ ಖಾತೆಗೆ 15 ಲಕ್ಷ ರುಪಾಯಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದನ್ನು ಚೇತು ಅವರು ಪ್ರಧಾನಿ ಮೋದಿಗೆ ನೆನಪು ಮಾಡಿಕೊಟ್ಟಿದ್ದಾರೆ. ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ನೀವು ನಿಮ್ಮ ಚುನಾವಣಾ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಬದಲಾಗಿ ರೈತರ ಕೃಷಿ ಉತ್ಪನ್ನಗಳ ಬೆಲೆ ಕಡಿಮೆ ಮಾಡಿ, ಅಡಿಗೆ ಅನಿಲ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೀರಿ. ಕಪ್ಪು ಹಣದ ವಿಚಾರದಲ್ಲಿ ನೀವು ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಮತ್ತು ನನ್ನ ಖಾತೆಗೆ ಕನಿಷ್ಠ 5 ಲಕ್ಷ ರುಪಾಯಿ ಜಮೆ ಮಾಡುವಂತೆ ನಾನು ನಿಮ್ಮಲ್ಲಿ ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದು ಚೇತು ಪತ್ರ ಬರೆದಿದ್ದಾರೆ.