ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡಲಾಗುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಕೋರ್ಟ್ ಮಧ್ಯಪ್ರವೇಶಿಸಬಾರದು ಎಂದು ಕೇಂದ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿತ್ತು. ಅಲ್ಲದೆ ಗುಪ್ತಚರ ಮಾಹಿತಿಯ ಪ್ರಕಾರ, ರೋಹಿಂಗ್ಯಾ ಮುಸ್ಲಿಮರು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಆ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರ, ದೆಹಲಿ, ಹೈದರಾಬಾದ್ ಹಾಗೂ ಮೇವಾತ್ ನಲ್ಲಿ ಸಕ್ರಿಯವಾಗಿವೆ ಎಂದು ತಿಳಿಸಿತ್ತು.