ಶನಿವಾರ ಪಾಟ್ನಾದಲ್ಲಿ ಆಯೋಜನೆಯಾಗಿರುವ ಪಾಟ್ನಾ ವಿಶ್ವವಿದ್ಯಾಲಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನರೇಂದ್ರ ಮೋದಿ, ಬಿಹಾರದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ನಿತೀಶ್ ಕುಮಾರ್ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಬಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ನಿತೀಶ್ ಕುಮಾರ್ ಅವರ ಬದ್ಧತೆ ಶ್ಲಾಘನಾರ್ಹವಾದದ್ದು. ಕೇಂದ್ರಸರ್ಕಾರ ಬಿಹಾರಕ್ಕೆ ಸಂಬಂಧಿಸಿದಂತೆ ಪ್ರಮುಖ ಆದ್ಯತೆ ನೀಡುತ್ತಿದೆ. ಬಿಹಾರ ಜ್ಞಾನ ಮತ್ತು ಗಂಗೆಯಿಂದ ಆಶೀರ್ವಾದಿಸಲ್ಪಟ್ಟಿದ್ದು, ಒಂದು ಕಾಲದಲ್ಲಿ ಹಾವಾಡಿಗರ ರಾಜ್ಯ ಎಂದು ಕರೆಸಿಕೊಳ್ಳುತ್ತಿದ್ದ ಪಾಟ್ನಾ ಇಂದು ಐಟಿ ರಾಜಧಾನಿಯಾಗಿ ಬೆಳೆದು ನಿಂತಿದೆ ಎಂದು ಮೋದಿ ಹೇಳಿದರು.