ಗ್ಯಾಂಗ್‍ರೇಪ್ ಸಂತ್ರಸ್ತೆ ಆತ್ಮಹತ್ಯೆ: ತನಿಖಾಧಿಕಾರಿ ಅಮಾನತು, 5 ಬಂಧನ

ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಐವರು...
ಬಂಧನ
ಬಂಧನ
Updated on
ಬಾಗ್ಪತ್(ಉತ್ತರಪ್ರದೇಶ): ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 
ಸಾಮೂಹಿಕ ಅತ್ಯಾಚಾರ ನಂತರ ಆರೋಪಿಗಳು ಅತ್ಯಾಚಾರ ಸಂತ್ರಸ್ತ್ರೆಗೆ ಬೆದರಿಕೆ ಹಾಕಿದ್ದರಿಂದ ಹೆದರಿದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಅಮಾನತು ಮಾಡಲಾಗಿದೆ. 
ಜುಲೈ ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧರು ಅತ್ಯಾಚಾರ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಮತ್ತೆ ಬಾಲಕಿ ಬೆದರಿಕೆ ಹಾಕಿದ್ದು ದೂರನ್ನು ವಾಪಸ್ ಪಡೆಯದಿದ್ದರೆ ಮತ್ತೇ ಸಾಮೂಹಿಕ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಈ ಹಿನ್ನೆಲೆಯಲ್ಲಿ ಶನಿವಾರ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. 
ಜುಲೈನಲ್ಲಿ ಪ್ರಕರಣ ದಾಖಲಾಗಿದ್ದು ನಾವು ವೈದ್ಯಕೀಯ ವರದಿ ಆಧರಿಸಿ ಐವರನ್ನು ಬಂಧಿಸಿದ್ದು ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸುವುದಾಗಿ ಬಾಗ್ಪಾತ್ ಪೊಲೀಸ್ ವರಿಷ್ಠಾಧಿಕಾರಿ ಜೈ ಪ್ರಕಾಶ್ ಹೇಳಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com