ದೀಪಕ್ ಅವರು ಸ್ಥಳಕ್ಕೆ ಹೋದ ಬಳಿಕ ವಾಹನವನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಏಕಾಏಕಿ ದಾಳಿ ಮಾಡದ್ದಾರೆ. ಅಲ್ಲದೆ, ವಾಹನದಿಂದ ದೀಪಕ್ ಅವರಿಗೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮ ದೀಪಕ್ ಅವರ ತಲೆ, ಕೈ, ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿಗಳು ದೀಪಕ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಐದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.