ಆರುಷಿ ಮತ್ತು ಹೇಮರಾಜ್ ಅವರನ್ನು ತಲ್ವಾರ್ ದಂಪತಿ ಹತ್ಯೆ ಮಾಡಿದ್ದಾರೆ ಎಂದು 2013ರಲ್ಲಿ ಹೇಳಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಇಬ್ಬರಿಗೂ ಜೀವವಾಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾದಿರಿಸಿತ್ತು.