ಮೀರುತ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಉತ್ತರಪ್ರದೇಶ ಪ್ರವಾಸೋದ್ಯಮ ಕೈಪಿಡಿಯಿಂದ ತಾಜ್'ಮಹಲ್ ಕೈಬಿಟ್ಟಿರುವುದಕ್ಕೆ ಬಹಳಷ್ಟು ಜನರಿಗೆ ಬೇಸರವಾಗಿದೆ. ಯಾವ ಇತಿಹಾಸದ ಬಗ್ಗೆ ನಾವು ಮಾತನಾಡುತ್ತಿದ್ದೇವೆ? ತಾಜ್ ಮಹಲ್ ಕಟ್ಟಿಸಿದ್ದ ಷಹಜಹಾನ್ ತನ್ನ ತಂದೆಯನ್ನೇ ಜೈಲಿಗಟ್ಟಿದ್ದ. ಹಿಂದೂಗಳನ್ನು ಇಲ್ಲವಾಗಿಸಲು ಬಯಸಿದ್ದ. ಇಂಥಹ ವ್ಯಕ್ತಿಗಳು ನಮ್ಮ ಇತಿಹಾಸದ ಭಾಗವಾದರೆ, ಇದು ಬಹಳ ಬೇಸರದ ಸಂಗತಿ. ಇಂತಹ ಇತಿಹಾಸವನ್ನು ನಾವು ಬದಲಿಸುತ್ತೇವೆಂದು ಹೇಳಿದ್ದಾರೆ.
ತಾಜ್ ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳಾಗಿದ್ದು, ಹೀಗಾಗಿ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನವಿಲ್ಲ. ತಾಜ್ ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯವು ಭಯೋತ್ಪಾದಕರ ಕಾರಸ್ಥಾನವಾಗಿದೆ ಎಂದು ಆರೋಪಿಸಿದ್ದಾರೆ.