ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಐಆರ್ ಸಿಟಿಸಿ ತನಿಖೆ ಆರಂಭಿಸಿತ್ತು. ಇದರಂತೆ ತನಿಖಾ ವರದಿಯನ್ನು ಬಹಿರಂಗಪಡಿಸಿರುವ ಇಲಾಖೆಯು, ಹವಾನಿಯಂತ್ರಿತ ಬೋಗಿಯಲ್ಲಿ ಗಾಳಿ ಕಲುಷಿತಗೊಂಡ ಕಾರಣ ಉಬ್ಬರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ವಾಂತಿಯ ದುರ್ವಾಸನೆ ಸುತ್ತಮುತ್ತ ಹಬ್ಬಿದ್ದು ಇದರಿಂದ ಮತ್ತಿಬ್ಬರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಇದು ವಾತಾವರಣವನ್ನು ಮತ್ತಷ್ಟು ಹದಗೆಡಿಸಿತ್ತು. ಇದರಂತೆ ಮತ್ತಷ್ಟು ಪ್ರಯಾಣಿಕರಿಗೂ ಹೊಟ್ಟೆ ತೊಳೆಸಿದಂತಹ ಅನುಭವವಾಗಿ ಅಸ್ವಸ್ಥಗೊಡಿದ್ದಾರೆ. ಆಹಾರದ ಗುಣಮಟ್ಟದಲ್ಲಿ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ತಿಳಿಸಿದೆ.