ಅಯೋಧ್ಯೆಯ ಸರಯೂ ನದೀ ತಟದಲ್ಲಿ ಬೃಹತ್ ದೀಪೋತ್ಸವವನ್ನು ಆಚರಿಸಲಾಗುತ್ತಿದ್ದು ಈ ಆಚರಣೆಗೆ ಯೋಗಿ ಆದಿತ್ಯನಾಥ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಉತ್ತರಪ್ರದೇಶದಲ್ಲಿ ರಾಮರಾಜ್ಯ ಸ್ಥಾಪನೆ ನಮ್ಮ ಕನಸು. ಇನ್ನು ಅಯೋಧ್ಯೆಯು ಮಾನವತೆಯ ಪುಣ್ಯಭೂಮಿಯಾಗಿದೆ. ರಾಮರಾಜ್ಯ ಪೌರಾಣಿಕ ಪರಿಕಲ್ಪನೆಯ ಮೂಲಕ ಮಾನವತೆ ಎಂದರೇನು ಎಂಬುದನ್ನು ನಾವು ಇಡಿಯ ಜಗತ್ತಿಗೆ ಕಲಿಸಿದವರಾಗಿದ್ದೇವೆ ಎಂದರು.