ಸಿಎಂ ಯೋಗಿ ಅಯೋಧ್ಯೆಯಲ್ಲಿ ಶ್ರೀ ರಾಮನ ವಿಚಾರವನ್ನು ರಾಜಕೀಯ ಮಾಡುತ್ತಿದ್ದಾರೆ: ಎಸ್'ಪಿ ಸಂಸದ

ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಕೀಯ ಮಾಡುತ್ತಿದ್ದಾರೆಂದು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್...
ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್
ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್
Updated on
ಹರ್ದೋಯ್: ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಕೀಯ ಮಾಡುತ್ತಿದ್ದಾರೆಂದು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ರಾಜಕೀಯ ಮಾಡುತ್ತಿರುವುದನ್ನು ಇಡೀ ದೇಶವೇ ನೋಡುತ್ತಿದೆ. ರಾಮನ ಹೆಸರಿನಲ್ಲಿ ಉತ್ತರಪ್ರದೇಶ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿದರೆ, ಜನರು ಅದನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಯೋಗಿ ಅದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ 2 ತಿಂಗಳು ಗೋರಖ್ಪುರದಲ್ಲಿಯೇ ಇದ್ದರು. ಉತ್ತರಪ್ರದೇಶ ರಾಜ್ಯದ ಬಗ್ಗೆ ಅವರಿಗೆ ಎಷ್ಟು ಕಾಳಜಿ ಇದೆ ಎಂಬುದು ಇದರಲ್ಲಿಯೇ ತಿಳಿಯಬಹುದಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com