ಅ.9 ಹಾಗೂ 16 ರಂದು ವಿಚಾರಣೆಗಾಗಿ ಕೋರ್ಟ್ ಗೆ ಕರೆದೊಯ್ಯಲು ಚಂದ್ರಶೇಖರ್ ಗೆ ದೆಹಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದಾಯ ತೆರಿಗೆ ಇಲಾಖೆ ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್ ಗೆ ಸಲ್ಲಿಸಿದ್ದ ವರದಿಯ ಪ್ರಕಾರ ಬೆಂಗಳೂರಿನಲ್ಲಿ ಚಂದ್ರಶೇಖರ್ ಗೆ ಹೊರಗೆ ಓಡಾಡಲು ಮುಕ್ತ ಅವಕಾಶ ನೀಡಲಾಗಿತ್ತು. ಅಷ್ಟೇ ಅಲ್ಲದೇ ಬ್ಯುಸಿನೆಸ್ ಡೀಲ್ ಗಳನ್ನು ಕುದುರಿಸಲೂ ಸಹ ಅವಕಾಶ ಮಾಡಿಕೊಡಲಾಗಿತ್ತು. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, 7 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ದೆಹಲಿ ಪೊಲೀಸ್ ಮುಖ್ಯ ವಕ್ತಾರ ಹಾಗೂ ವಿಶೇಷ ಆಯುಕ್ತ(ಟ್ರಾಫಿಕ್) ದೀಪೇಂದ್ರ ಪಾಠಕ್ ಮಾಹಿತಿ ನೀಡಿದ್ದಾರೆ.