ಮೃತರನ್ನು ಪ್ರಭಾಕರನ್, ಬಾಲು, ಚಂದ್ರಶೇಖರನ್, ಧನಪಾಲ್, ಮುನಿಸ್ವಾಮಿ, ರಾಮಲಿಂಗಮ್, ಅಂಬರಸನ್ ಮತ್ತು ಮನಿವನ್ನನ್ ಎಂದು ಗುರ್ತಿಸಲಾಗಿದೆ. ಗಾಯಾಳುಗಳನ್ನು ವೆಂಕಟೇಶನ್, ಸಂಥಿಲ್ ಮತ್ತು ಪ್ರೇಮ್ ಕುಮಾರ್ ಹೇಳಲಾಗುತ್ತಿದೆ.
ಘಟನೆ ಬಳಿಕ ಜಿಲ್ಲಾಧಿಕಾರಿ ಎಸ್. ಸುರೇಶ್ ಕುಮಾರ್ ಅವರು ಘಟನಾ ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಆಕ್ರೋಶಭರಿತ ಕೆಲಸಗಾರರು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಬಳಿಕ ಸ್ಥಳೀಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆಂದು ತಿಳಿದುಬಂದಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು, ಘಟನೆ ದುರಾದೃಷ್ಟಕರ. ಮೃತರ ಕುಟುಂಬಸ್ಥರಿಗೆ ಸರ್ಕಾರ ರೂ. 7.5 ಲಕ್ಷ ಪರಿಹಾರವನ್ನು ನೀಡಲಿದೆ. ಅಲ್ಲದೆ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರೂ.1.5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ರೂ.50 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.