ಈ ಬಗ್ಗೆ ಟ್ವಿಟ್ಟರ್ ನಲ್ಲಿ ಕಟುವಾಗಿ ಟೀಕಿಸಿರುವ ಚಿದಂಬರಂ, ಗುಜರಾತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಘೋಷಿಸಲು ಚುನಾವಣಾ ಆಯೋಗ ಪ್ರಧಾನ ಮಂತ್ರಿಗೆ ಅಧಿಕಾರ ನೀಡಿದೆ. ಗುಜರಾತ್ ಸರ್ಕಾರಕ್ಕೆ ಅನುಕೂಲವಾಗಲು ಅದು ಎಲ್ಲಾ ಯೋಜನೆ, ರಿಯಾಯಿತಿಗಳನ್ನು ಘೋಷಣೆ ಮಾಡಿದ ನಂತರ ದೀರ್ಘ ರಜೆಯ ಬಳಿಕ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುತ್ತದೆ ಎಂದು ಟೀಕಿಸಿದ್ದಾರೆ.