ಘಾಜೀಪುರ್: ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ

ಉತ್ತರ ಪ್ರದೇಸದ ಘಾಜೀಪುರ್ ದಲ್ಲಿ ಇಂದು ಬೆಳಗ್ಗೆ ಆರ್‌ ಎಸ್‌ ಎಸ್‌ ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾದಲಾಗಿದೆ.
ಘಾಜೀಪುರ್: ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಘಾಜೀಪುರ್: ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಘಾಜೀಪುರ್: ಉತ್ತರ ಪ್ರದೇಸದ ಘಾಜೀಪುರ್ ದಲ್ಲಿ ಇಂದು ಬೆಳಗ್ಗೆ ಆರ್‌ ಎಸ್‌ ಎಸ್‌ ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾದಲಾಗಿದೆ.
ಆರ್‌ ಎಸ್‌ ಎಸ್‌ ಕಾರ್ಯಕರ್ತ, ಸ್ಥಳೀಯ ಪತ್ರಕರ್ತನಾಗಿದ್ದ ರಾಜೇಶ್‌ ಮಿಶ್ರಾ ಅವರ ಕಛೇರಿಯಲ್ಲೇ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದಾರೆ.  ರಾಜೇಶ್‌ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಒಂದೇ ಸಮನೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆ ಗೈದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ರಾಜೇಶ್‌  ಸಹೋದರ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂದ ಓದರನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಹಿರಿಯ ಪೋಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳ ಪತ್ತೆಗೆ ವಿಶೇಷ ತಂದ ರಚಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಪಂಜಾಬಿನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com