ತಾಜ್'ಮಹಲ್ ಸುಂದರವಾದ ಸ್ಮಶಾನ: ಹರಿಯಾಣ ಸಚಿವ ಅನಿಲ್ ವಿಜ್

ತಾಜ್ ಮಹಲ್ ಕುರಿತಂತೆ ಬಿಜೆಪಿ ನಾಯಕ ಸಂಗೀತ್ ಸೋಮ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಹರಿಯಾಣ ಸಚಿವ ಅನಿಲ್ ವಿಜ್ ಅವರು ತಾಜ್'ಮಹಲ್ ಒಂದು ಸುಂದರವಾದ ಸ್ಮಶಾನವೆಂದು ವರ್ಣಿಸಿದ್ದಾರೆ...
ತಾಜ್ ಮಹಲ್
ತಾಜ್ ಮಹಲ್
Updated on

ಚಂಡೀಗಢ: ತಾಜ್ ಮಹಲ್ ಕುರಿತಂತೆ ಬಿಜೆಪಿ ನಾಯಕ ಸಂಗೀತ್ ಸೋಮ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಹರಿಯಾಣ ಸಚಿವ ಅನಿಲ್ ವಿಜ್ ಅವರು ತಾಜ್'ಮಹಲ್ ಒಂದು ಸುಂದರವಾದ ಸ್ಮಶಾನವೆಂದು ವರ್ಣಿಸಿದ್ದಾರೆ. 

ತಾಜ್ ಮಹಲ್ ವಿವಾದ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಹರಿಯಾಣ ರಾಜ್ಯದ ಆರೋಗ್ಯ ಹಾಗೂ ಕ್ರೀಡಾ ಸಚಿವ ಅನಿಲ್ ವಿಜ್ ಅವರು, 'ತಾಜ್ ಮಹಲ್' ಸುಂದರವಾದ ಸ್ಮಶಾನ ಎಂದು ಹೇಳಿದ್ದಾರೆ. 

ಉತ್ತರಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ತನ್ನ ರಾಜ್ಯ ಪ್ರವಾಸೋದ್ಯಮ ಕೈಪಿಡಿಯಿಂದ ತಾಜ್ ಮಹಲ್ ನ್ನು ಕೈಬಿಟ್ಟಿತ್ತು. ಇದರ ಪರಿಣಾಮ ಇದೀಗ ಭಾರೀ ಟೀಕೆ, ವಿವಾದಗಳು ಸೃಷ್ಟಿಯಾಗತೊಡಗಿದೆ.

ತಾಜ್ ಮಹಲ್ ಕುರಿತಂತೆ ಪರ ಹಾಗೂ ವಿರೋಧಗಳ ಟೀಕೆಗಳು ಒಂದೆಡೆಯಾಗಿದ್ದರೆ, ಮತ್ತೊಂದೆಡೆ ರಾಜಕೀಯ ಕೆಸರೆರಚಾಟಗಳು ಆರಂಭಗೊಂಡಿವೆ. 

ಈ ಹಿಂದೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರು, ತಾಜ್ ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳು. ಹೀಗಾಗಿ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನವಿಲ್ಲ. ತಾಜ್ ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ ಎಂದು ಹೇಳಿದ್ದರು. 

ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಾಜ್'ಮಹಲ್'ನ್ನು ಯಾರು ನಿರ್ಮಾಣ ಮಾಡಿದರು, ಯಾವುದಕ್ಕಾಗಿ ನಿರ್ಮಾಣ ಮಾಡಿದರು ಎಂಬುದು ಮುಖ್ಯವಲ್ಲ, ತಾಜ್ ಮಹಲ್ ನಿರ್ಮಾಣವಾಗಿದ್ದು ಭಾರತೀಯ ಕಾರ್ಮಿಕರ ರಕ್ತ ಹಾಗೂ ಶ್ರಮದಿಂದ, ಹಾಗಾಗಿ ತಾಜ್ ಮಹಲ್ ನಮಗೆ ಅತ್ಯಂತ ಮುಖ್ಯವಾಗುತ್ತದೆ ಎಂದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com