ಮತ್ತೆ ಪಾಕ್ ಕದನ ವಿರಾಮ ಉಲ್ಲಂಘನೆ; 'ಪಾಪಿ'ಸ್ತಾನ ಸೈನಿಕರ ಗುಂಡಿಗೆ ಬಡ ಕೂಲಿ ಕಾರ್ಮಿಕನ ಸಾವು!

ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬಾರಾಮುಲ್ಲಾ: ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕಮಲ್ ಕೋಟ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪೋಸ್ಟ್ ಗಳತ್ತ ಗುಂಡು ಹಾರಿಸಿದ್ದು, ಈ ವೇಳೆ ಗಡಿಯಲ್ಲಿ ಕೂಲಿ  ಮಾಡುತ್ತಿದ್ದ ಓರ್ವ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, ಅಂತೆಯೇ ಗುಂಡಿನ ದಾಳಿಯಲ್ಲಿ ಓರ್ವ ಪುಟ್ಟ ಬಾಲಕಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಗಾಯಗೊಂಡ ಬಾಲಕಿಯನ್ನು ಗುಂಡಿನ ಚಕಮಕಿ  ನಡುವೆಯೇ ಸೈನಿಕರು ಉರಿ ಸೆಕ್ಟರ್ ನಲ್ಲಿರುವ ಸೇನಾ ಅಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಸ್ತುತ ಆಕೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 
ಇನ್ನು ಪ್ರಸ್ತುತ ಪಾಕಿಸ್ತಾನ ಸೈನಿಕರ ಅಪ್ರಚೋದಿತ ದಾಳಿಯಿಂದಾಗಿ ಸಾವನ್ನಪ್ಪಿರುವ ಸ್ಥಳೀಯ ನಾಗರಿಕ ಬಡ ಕೂಲಿ ಕಾರ್ಮಿಕನಾಗಿದ್ದು, ಗಡಿಯಲ್ಲಿ ಸೈನಿಕರ ಸರಕುಗಳನ್ನು ಸಾಗಣೆ ಮಾಡುತ್ತಿದ್ದ ಎಂದು ಸೇನಾ ಮೂಲಗಳು  ತಿಳಿಸಿವೆ. ನಿನ್ನೆ ಕೂಡ ಸೈನಿಕರ ಸರಕುಗಳನ್ನು ಸಾಗಿಸುವಾಗಲೇ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಆತನಿಗೆ ಗುಂಡು ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com