ನೋಟು ನಿಷೇಧವನ್ನು ವಿರೋಧಿಸಿ ವಿಪಕ್ಷಗಳು ನ.8 ರಂದು ಕರಾಳ ದಿನ ಆಚರಿಸುತ್ತಿದ್ದು, ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿಯಾಗಿ ಬಿಜೆಪಿ ನ.8 ರಂದು ಕಪ್ಪುಹಣ ವಿರೋಧಿ ದಿನವನ್ನು ಆಚರಿಸಲು ನಿರ್ಧರಿಸಿದೆ. ದೇಶದಲ್ಲಿ ಪರ್ಯಾಯ ಕಪ್ಪುಹಣವಿತ್ತು, ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಕಪ್ಪುಹಣ ನಿರ್ಮೂಲನೆಗೆ ಕ್ರಮ ಕೈಗೊಂಡರು, ಆದ್ದರಿಂದ ನ.8 ರಂದು ಬಿಜೆಪಿ ಕಪ್ಪುಹಣ ವಿರೋಧಿ ದಿನವನ್ನು ಆಚರಣೆ ಮಾಡಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.