ಡಾರ್ಜಿಲಿಂಗ್ ಅಶಾಂತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಬರುನ್ ಭುಜೇಲ್ ರನ್ನು ಆಗಸ್ಟ್ ನಲ್ಲಿ ಬಂಧಿಸಿ ಸಿಲಿಗುರಿ ಜೈಲಿನಲ್ಲಿ ಇರಿಸಿದ್ದರು. ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಕೊಡಿಸಲು ಪೊಲೀಸರು ವಿಳಂಬ ಮಾಡಿರುವುದರಿಂದ ಭುಜೇಲ್ ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದರೆ ಜಿಜೆಎಂ ಮುಖ್ಯಸ್ಥ ಬಿಮಲ್ ಗುರುಂಗ್ ಅವರು ಭುಜೇಲ್ ಪೊಲೀಸರ ಕಿರುಕುಳದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.